Breaking News

ಕಾಂಗ್ರೆಸ್‌ ಚುನಾವಣಾ ಚಾಣಕ್ಯ ಸುನೀಲ್‌ ಕನುಗೋಳು ಈಗ ಸಿಎಂಗೆ ಮುಖ್ಯ ಸಲಹೆಗಾರ

ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ‎ಬಳ್ಳಾರಿ ಜಿಲ್ಲೆಯ ಸುನೀಲ್‌ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.‌ ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್‌ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ, …

Read More »

ಭದ್ರಾವತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

‎ಶಿವಮೊಗ್ಗ: ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ  ಅನ್ವರ್ ಕಾಲೋನಿಯಲ್ಲಿ ನಡೆದಿದೆ. ‎ ‎ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ‎ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ …

Read More »

ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ‎ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.  ‎ಇನ್ನು ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು …

Read More »

ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ

‎ಬೆಳಗಾವಿ: ಈಜಲು  ಹಳ್ಳಕ್ಕೆ ಇಳಿದಿದ್ದ ಅಣ್ಣ- ತಮ್ಮ ಇಬ್ಬರೂ ನೀರುಪಾಲಾದ ಘಟನೆ ಮೂಡಲಗಿ  ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ‎ಗ್ರಾಮದ ಸಾಗರ್ ಮಾದರ (15), ಪ್ರವೀಣ್ ಮಾದರ (13) ಮೃತ ಸಹೋದರರು. ಇಬ್ಬರು ಹಳ್ಳದಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿಗಿಳಿದಾಗ ಪ್ರವೀಣ್ ಮುಳುಗಿದ್ದಾನೆ. ಇದನ್ನು ಗಮನಿಸಿ ಆತನ ರಕ್ಷಣೆಗೆ ಸಾಗರ್ ತೆರಳಿದ್ದು, ಆತನೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.  ‎ಮೃತದೇಹವನ್ನು ಸ್ಥಳೀಯರು ಹಾಗೂ ಪೊಲೀಸರು ನೀರಿನಿಂದ ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ …

Read More »

ಎಲ್ಲರೂ ಒಟ್ಟಿಗೇ ಹೋಗೋಣ, 2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಡಿಕೆಶಿ

‎ಬೆಂಗಳೂರು: ಪಕ್ಷಬೇಧ ಮರೆತು ಎಲ್ಲರನ್ನೂ ಒಟ್ಟಿಗೇ ಕರೆದುಕೊಂಡು ಹೋಗಿ. 2028ರ ವಿಧಾನಸಭೆ ಚುನಾವಣೆ  ಗೆಲ್ಲುವುದು ನಿಮ್ಮ ಗುರಿಯಾಗಿರಲಿ ಎಂದು ಸಿಎಂ ಡಿಕೆ ಶಿವಕುಮಾರ್   ತಿಳಿಸಿದ್ದಾರೆ. ‎ಮಾಜಿ ಶಾಸಕ ಮಂಜುನಾಥ್ ಹಾಗೂ ಮೈಸೂರು ಮುಖಂಡ, ವಕ್ತಾರ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಹುಣಸೂರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ತಮ್ಮನ್ನು ಅಭಿನಂದಿಸಿದ ಸಂದರ್ಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ‎ ‎ಹಿಂದೆ ಆಗಿದ್ದು, ದ್ವೇಷ, ಅಸೂಯೆ, ಪ್ರತೀಕಾರ ಎಂಬುದನ್ನು …

Read More »

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ‎

ಬೆಂಗಳೂರು: ದೇವೇಗೌಡರಿಗೆ ಬಿಜೆಪಿ  ಅವರು ರಾಜ್ಯಸಭೆ  ಟಿಕೆಟ್ ಕೊಡಲಿಲ್ಲ ಅಂತ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು  ತಿಳಿಸಿದ್ದಾರೆ. ‎ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೊಡಿ ಅಂತ ಬಿಜೆಪಿ ಅವರಿಗೆ ನಾವು ಕೇಳಿರಲಿಲ್ಲ. ಜನರ ಆಶಯ ಮತ್ತೆ ದೇವೇಗೌಡರು ಹೋಗುತ್ತಾರೆ ಅಂತ ಇತ್ತು. ಜನರ ಪರ ಅವರು ಮಾತನಾಡುತ್ತಾರೆ ಅಂತ ಇತ್ತು. ನಾವು ಟಿಕೆಟ್ ಕೇಳಿಲ್ಲ. ಇದರಿಂದ ಮೈತ್ರಿಗೆ …

Read More »

ನನಗೆ ಕೊಟ್ಟಿರೋ ಖಾತೆ ಬಗ್ಗೆ ಅಸಮಾಧಾನ ಇಲ್ಲ: ಬೈರತಿ ಸುರೇಶ್

ಬೆಂಗಳೂರು: ಖಾತೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ಸಚಿವ ಬೈರತಿ ಸುರೇಶ್  ತಿಳಿಸಿದ್ದಾರೆ. ‎ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್, ಸಿಎಂ ಡಿಕೆಶಿ, ಸಿದ್ದರಾಮಯ್ಯ ಆಶೀರ್ವಾದ ಮಾಡಿ ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಸಮರ್ಥವಾಗಿ ನಿಭಾಯಿಸುವ ಶಕ್ತಿ ದೇವರು ಕೊಡುವ ವಿಶ್ವಾಸ ಇದೆ. ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹೊಸ ಕಾರ್ಯಕ್ರಮ ಮಾಡಿ ಉತ್ತಮವಾಗಿ ಇಲಾಖೆ ನಡೆಸಿದ್ದೆ. ಇದೇ ರೀತಿ ಕೆಲಸ ಸಾರಿಗೆ …

Read More »

KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

‎ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ  ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ‎ನಿರ್ಮಲಾ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ‎ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ …

Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ – ಚಿಂದಿ ಆಯುವವನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಂದಿ ಆಯುವವನ ಮೇಲೆ ವೈಟ್‌ಫೀಲ್ಡ್  ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ‎ಜೂನ್ 2ರಂದು ಪಟ್ಟಂದೂರು ಅಗ್ರಹಾರದಲ್ಲಿ ಘಟನೆ ನಡೆದಿತ್ತು. ಕೋ ಲಿವಿಂಗ್ ಪಿಜಿಯಲ್ಲಿ ವಾಸವಾಗಿದ್ದ ಕಾಲೇಜು ವಿದ್ಯಾರ್ಥಿನಿ ಓದುತ್ತಿದ್ದ ವೇಳೆ ನಿದ್ದೆ ಬರುತ್ತಿದೆ ಎಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಟೀ ಕುಡಿಯಲು ಹೋಗಿದ್ದಳು. ಟೀ ಕುಡಿದು ವಾಪಸ್ಸಾಗುವ ವೇಳೆ ವಿದ್ಯಾರ್ಥಿನಿಯನ್ನ ಆರೋಪಿ ಸೈಬುಲ್ …

Read More »

ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ

ವಿಜಯಪುರ: ಪಾನ್ ಶಾಪ್‌ನಲ್ಲಿ  ನಿಗೂಢ ಸ್ಫೋಟ  ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ  ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್‌ನಲ್ಲಿ ಘಟನೆ ನಡೆದಿದೆ. ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರೋ ಶಂಕೆ ವ್ಯಕ್ತವಾಗಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನ …

Read More »